ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
Cross references
ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ