ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
Cross references
ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.