ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
Cross references
ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
ಎಡೆಬಿಡದೆ ಪ್ರಾರ್ಥನೆ ಮಾಡಿರಿ.
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.