ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.