Home Bibles ಲೂಕ 18:14 · ಕನ್ನಡ ಬೈಬಲ್
ಲೂಕ 18:14 · ಕನ್ನಡ ಬೈಬಲ್

ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Cross references

ನಿರ್ಗಮಕಾಂಡ 18:11

ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.

1 ಸಮುವೇಲ 1:18

ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.

ಯೋಬ 9:20

ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.

ಯೋಬ 22:29

ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.

ಯೋಬ 25:4

ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?

ಯೋಬ 40:9

ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?

ಕೀರ್ತನೆಗಳು 138:6

ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.

ಕೀರ್ತನೆಗಳು 143:2

ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

ಸಾಮೇತಿಗಳು 3:34

ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.

ಸಾಮೇತಿಗಳು 15:33

ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.

ಸಾಮೇತಿಗಳು 16:18

ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.

ಸಾಮೇತಿಗಳು 18:12

ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.

ಸಾಮೇತಿಗಳು 25:7

ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.

ಸಾಮೇತಿಗಳು 29:23

ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.

ಸಭಾಪ್ರಸಂಗಿ 9:7

ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

ಯೆಶಾಯ 2:11

ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.

ಯೆಶಾಯ 45:25

ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆಶಾಯ 57:15

ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ದಾನಿಯೇಲ 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ಹಬಕ್ಕೂಕ 2:4

ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.

ಮತ್ತಾಯ 5:3

ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

ಮತ್ತಾಯ 23:12

ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಲೂಕ 1:52

ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.

ಲೂಕ 5:24

ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

ಲೂಕ 7:47

ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.

ಲೂಕ 10:29

ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.

ಲೂಕ 14:11

ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಲೂಕ 16:15

ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

ರೋಮಾಪುರದವರಿಗೆ 3:20

ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.

ರೋಮಾಪುರದವರಿಗೆ 4:5

ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 8:33

ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.

ಗಲಾತ್ಯದವರಿಗೆ 2:16

ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ

ಯಾಕೋಬ 2:21

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

ಯಾಕೋಬ 4:6

ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

ಯಾಕೋಬ 4:10

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.

1 ಪೇತ್ರ 5:5

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

Interlinear

Choose Theme