ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
Cross references
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.