ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
Cross references
ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.