ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
Cross references
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.