ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
Cross references
ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.