ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
Cross references
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.