ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
Cross references
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.