Home Bibles ಲೂಕ 19:42 · ಕನ್ನಡ ಬೈಬಲ್
ಲೂಕ 19:42 · ಕನ್ನಡ ಬೈಬಲ್

ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.

Cross references

ದ್ವಿತೀಯೋಪದೇಶಕಾಂಡ 5:29

ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.

ದ್ವಿತೀಯೋಪದೇಶಕಾಂಡ 32:29

ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

ಕೀರ್ತನೆಗಳು 32:6

ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.

ಕೀರ್ತನೆಗಳು 81:13

ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,

ಕೀರ್ತನೆಗಳು 95:7

ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ

ಯೆಶಾಯ 6:9

ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

ಯೆಶಾಯ 29:10

ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.

ಯೆಶಾಯ 44:18

ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಯೆಶಾಯ 48:18

ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;

ಯೆಶಾಯ 55:6

ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಯೆಹೆಜ್ಕೇಲ 18:31

ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

ಯೆಹೆಜ್ಕೇಲ 33:11

ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಮತ್ತಾಯ 13:14

ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

ಲೂಕ 1:77

ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಲೂಕ 2:10

ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.

ಲೂಕ 10:5

ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.

ಲೂಕ 19:44

ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.

ಯೋಹಾನ 12:35

ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಯೋಹಾನ 12:38

ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.

ಅಪೋಸ್ತಲರ ಕೃತ್ಯಗಳು 10:36

ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 28:25

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ರೋಮಾಪುರದವರಿಗೆ 11:7

ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

2 ಕೊರಿಂಥದವರಿಗೆ 3:14

ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

2 ಕೊರಿಂಥದವರಿಗೆ 4:3

ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.

2 ಕೊರಿಂಥದವರಿಗೆ 6:1

ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

2 ತೆಸಲೋನಿಕದವರಿಗೆ 2:9

ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ

ಹೆಬ್ರಿಯರಿಗೆ 3:7

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಹೆಬ್ರಿಯರಿಗೆ 3:13

ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.

ಹೆಬ್ರಿಯರಿಗೆ 3:15

ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಹೆಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಹೆಬ್ರಿಯರಿಗೆ 12:24

ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

Interlinear

Choose Theme