ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
Cross references
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.