ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
Cross references
ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
ಕರ್ತನು ಮೋಶೆಯೊಡನೆ ಮಾತನಾಡಿ
ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.