ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.