ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
Cross references
ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.