ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
Cross references
ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ