ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
Cross references
ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.