ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
Cross references
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.