ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
Cross references
ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.
ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.