ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
Cross references
ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.