ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
ಇಗೋ, ಕರ್ತನ ದಿನವು ಬರುತ್ತದೆ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.