Home Bibles ಲೂಕ 21:22 · ಕನ್ನಡ ಬೈಬಲ್
ಲೂಕ 21:22 · ಕನ್ನಡ ಬೈಬಲ್

ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

Cross references

ಲೇವ್ಯಕಾಂಡ 26:14

ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ

ದ್ವಿತೀಯೋಪದೇಶಕಾಂಡ 28:15

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 29:19

ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

ದ್ವಿತೀಯೋಪದೇಶಕಾಂಡ 32:34

ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?

ದ್ವಿತೀಯೋಪದೇಶಕಾಂಡ 32:43

ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.

ಕೀರ್ತನೆಗಳು 69:22

ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

ಕೀರ್ತನೆಗಳು 149:7

ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.

ಯೆಶಾಯ 34:8

ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.

ಯೆಶಾಯ 61:2

ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ

ಯೆಶಾಯ 63:4

ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.

ಯೆಶಾಯ 65:12

ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಯೆರೆಮಿಯ 51:6

ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಹೊಶೇಯ 9:7

ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

ಜೆಕರ್ಯ 11:1

ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.

ಜೆಕರ್ಯ 14:1

ಇಗೋ, ಕರ್ತನ ದಿನವು ಬರುತ್ತದೆ.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 1:22

ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.

ಮಾರ್ಕ 13:19

ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

2 ಪೇತ್ರ 2:9

ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

2 ಪೇತ್ರ 3:7

ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

Interlinear

Choose Theme