ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
Cross references
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.