ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
Cross references
ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
ಎಡೆಬಿಡದೆ ಪ್ರಾರ್ಥನೆ ಮಾಡಿರಿ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.