Home Bibles ಲೂಕ 22:18 · ಕನ್ನಡ ಬೈಬಲ್
ಲೂಕ 22:18 · ಕನ್ನಡ ಬೈಬಲ್

ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.

Cross references

ನ್ಯಾಯಾಧಿಪತಿಗಳು 9:13

ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.

ಕೀರ್ತನೆಗಳು 104:15

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ಸಾಮೇತಿಗಳು 31:6

ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.

ಪರಮಗೀತ 5:1

ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.

ಯೆಶಾಯ 24:9

ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.

ಯೆಶಾಯ 25:6

ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.

ಯೆಶಾಯ 55:1

ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ಜೆಕರ್ಯ 9:15

ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.

ಜೆಕರ್ಯ 9:17

ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

ಮತ್ತಾಯ 16:18

ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

ಮತ್ತಾಯ 26:29

ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.

ಮಾರ್ಕ 9:1

ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ಮಾರ್ಕ 14:23

ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.

ಮಾರ್ಕ 14:25

ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ಮಾರ್ಕ 15:23

ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.

ಲೂಕ 9:27

ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.

ಲೂಕ 21:31

ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.

ಲೂಕ 22:16

ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಅಪೋಸ್ತಲರ ಕೃತ್ಯಗಳು 2:30

ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

ಎಫೆಸದವರಿಗೆ 5:18

ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.

ಕೊಲೊಸ್ಸೆಯವರಿಗೆ 1:13

ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.

Interlinear

Choose Theme