ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
Cross references
ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.