ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
Cross references
ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.