ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
Cross references
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು