ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
Cross references
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.