ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.