ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
Cross references
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.