ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.