ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
Cross references
ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.