ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
Cross references
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.