ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ