ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
Cross references
ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.