ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
Cross references
ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.
ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.