Home Bibles ಲೂಕ 3:8 · ಕನ್ನಡ ಬೈಬಲ್
ಲೂಕ 3:8 · ಕನ್ನಡ ಬೈಬಲ್

ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

Cross references

ಯೆಹೋಶುವ 4:3

ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.

ನೆಹೆಮ್ಯ 5:11

ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.

ಯೆಶಾಯ 1:16

ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

ಯೆಶಾಯ 48:1

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಯೆರೆಮಿಯ 7:4

ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?

ಯೆಹೆಜ್ಕೇಲ 18:27

ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.

ಮತ್ತಾಯ 8:11

ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯ 21:43

ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಲೂಕ 13:28

ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

ಲೂಕ 16:23

ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.

ಲೂಕ 19:40

ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.

ಯೋಹಾನ 8:33

ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.

ಯೋಹಾನ 8:39

ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.

ಅಪೋಸ್ತಲರ ಕೃತ್ಯಗಳು 26:20

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ರೋಮಾಪುರದವರಿಗೆ 4:16

ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

ರೋಮಾಪುರದವರಿಗೆ 9:7

ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.

2 ಕೊರಿಂಥದವರಿಗೆ 7:10

ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

ಗಲಾತ್ಯದವರಿಗೆ 3:28

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಫಿಲಿಪ್ಪಿಯವರಿಗೆ 1:11

ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಹೆಬ್ರಿಯರಿಗೆ 6:7

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

Interlinear

Choose Theme