ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
Cross references
ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.
ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;