ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
Cross references
ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.