ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.