ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
Cross references
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.