ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
Cross references
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.