ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
Cross references
ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.