ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
Cross references
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ