ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
Cross references
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.