ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
Cross references
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.