ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Cross references
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.