ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Cross references
ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.